ಮೈಸೂರು : ಪರಿಶಿಷ್ಟ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ನಂಜನಗೂಡಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. ಗಟ್ಟವಾಡಿ ಗ್ರಾಮದ ಶಶಿಕಲಾ (38) ಕೊಲೆಯಾದ ವಿವಾಹಿತ ಮಹಿಳೆ.
ಕಿಡಿಗೇಡಿಗಳು ಮಹಿಳೆ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆಗೈದಿದ್ದಾರೆ. ಮಹಿಳೆಯ ಮೃತದೇಹ ನಂಜುಂಡಪ್ಪ ಅಲಿಯಾಸ್ ಸಿದ್ದಲಿಂಗಪ್ಪ ಎಂಬುವರ ಬಾಳೆ ತೋಟದಲ್ಲಿ ಪತ್ತೆಯಾಗಿದೆ. ಘಟನೆಯ ಸಂಬಂಧ ದೊಡ್ಡ ಕವಲಂದೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ DySP ರಘು, PSI ಲಕ್ಷ್ಮಿಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ರವಾನಿಸಲಾಗಿದ್ದು, ಮಹಿಳೆಯ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಪರಿಶಿಷ್ಟ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಗಟ್ಟವಾಡಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : ಮುತ್ತುರಾಜ್ ನಿರ್ದೇಶನದ ‘ಲಿಪ್ ಲಾಕ್’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ..!