Download Our App

Follow us

Home » ಜಿಲ್ಲೆ » ವಿಜಯನಗರ : ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲವೆಂದು ಯುವಕ ವಿಷ ಸೇವಿಸಿ ಆತ್ಮಹ*ತ್ಯೆ..!

ವಿಜಯನಗರ : ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲವೆಂದು ಯುವಕ ವಿಷ ಸೇವಿಸಿ ಆತ್ಮಹ*ತ್ಯೆ..!

ವಿಜಯನಗರ : ಮದುವೆಯಾಗಲು ಯಾರು ಹೆಣ್ಣು ಕೊಡುತ್ತಿಲ್ಲವೆಂದು ಯುವಕನೊಬ್ಬ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಗ್ರಾಮದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆಯ ಗ್ರಾಮದ ಬಿ ಮಧುಸೂದನ್ (26) ಸಾವನ್ನಪ್ಪಿರುವ ಯುವಕನಾಗಿದ್ದಾನೆ. ಹುಡುಗನ ತಂದೆಯ ವರ್ತನೆ ಸರಿ ಇಲ್ಲ. ಮಾನಸಿಕ ಅಸ್ವಸ್ಥ, ಎಂದು ಹೆಣ್ಣು ಕೊಡುವವರು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಹುಡುಗಿ ಕೊಡಲು ನಿರಾಕರಿಸಿದಕ್ಕೆ ಯುವಕ ಮನನೊಂದಿದ್ದ.

ಹೆಣ್ಣು ಸಿಗದಿದ್ದಕ್ಕೆ ಬಿ ಮಧುಸೂದನ್ ಕುಡಿತದ ಚಟಕ್ಕೆ ಕೂಡ ಬಿದ್ದಿದ್ದ ಎನ್ನಲಾಗುತ್ತಿದೆ. ನನಗೆ ಮದುವೆನೇ ಆಗಲ್ಲ ಎಂದು ಮಧುಸೂದ ಮನನೊಂದು ವಿಷಯ ಸೇವಿಸಿದ್ದ.

ಗ್ರಾಮದ ಹೊರವಲಯದ ವೇಣಿ ಈರಪ್ಪನ ಮಠದ ಬಳಿ ಜ.5 ರಂದು ಮಧುಸೂಧನ ವಿಷ ಸೇವಿದ್ದು,  ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೈಸೂರಿನ ಅರುಣ್​ ಯೋಗಿರಾಜ್​ರನ್ನು ಹಾಡಿ ಹೊಗಳಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಶ್ರೀ ಚಂಪತ್ ರೈ..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here