ತುಮಕೂರಿನಲ್ಲಿ PWD ಇಲಾಖೆ ಇಂಜಿನಿಯರ್‌ ಆತ್ಮಹತ್ಯೆ!

ತುಮಕೂರು : ತುಮಕೂರಿನಲ್ಲಿ PWD ಇಲಾಖೆಯ ಇಂಜಿನಿಯರ್ ಮಂಜು ಪ್ರಸಾದ್ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಂಜುಪ್ರಸಾದ್(33) ಪಾವಗಡ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಅವರ ತಾಯಿ ಒಂದೂವರೆ ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದ ಮಂಜುಪ್ರಸಾದ್ ಅವರು, ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ನಿನ್ನೆ ಬೆಳಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಂಜುಪ್ರಸಾದ್, ಕೊರಟಗೆರೆಯಲ್ಲಿ ಸಂಬಂಧಿಕರಿಗೆ ಮೊಬೈಲ್ ಮತ್ತು ಮನೆಯ ಕೀ ಕೊಟ್ಟಿದ್ದರು. ಬಳಿಕ ಮೀಟಿಂಗ್ ಇದೆ ಎಂದು ಹೇಳಿ ದೇವರಾಯನದುರ್ಗಕ್ಕೆ ಬಂದು ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಪಿಚ್ಚರ್ ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್!

Btv Kannada
Author: Btv Kannada

Leave a Comment

Read More