ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ಖಂಡಿಸಿ ಮತ್ತು ಬಿಜೆಪಿ ನಾಯಕರ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಸಿಕ್ಯೂಷನ್ ಅನುಮತಿಗಾಗಿ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ನಡೆಸಿದೆ.
ಇದೀಗ ಕಾಂಗ್ರೆಸ್ ನಾಯಕರ ಹೋರಾಟಕ್ಕೆ ಟಾಂಗ್ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಬಂಡೆ ಜೊತೆಗಿದ್ದ ಮೇಲೆ ಸಿಎಂ ಸಿದ್ದರಾಮಯ್ಯಗೆ ಏಕೆ ಭಯ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಬಿಡಿ ವ್ಯಂಗ್ಯವಾಡಿದ್ದಾರೆ.
ಪ್ರಾಸಿಕ್ಯೂಷನ್ ವಿಚಾರದಲ್ಲಿ ಸಿಎಂ ಸಿದ್ದು ಕಾನೂನು ಸಮರ ನಡೆಸಲಿ. ಬೇರೆಯವರು ಅವರವರ ಪ್ರಕರಣಗಳಲ್ಲಿ ಕಾನೂನು ಹೋರಾಟ ಮಾಡ್ತಿದ್ದಾರೆ. ಡಿಕೆಶಿ ವಿರುದ್ಧವೂ ಕೇಸ್ ಇವೆ, ಅವ್ರು ಸಿದ್ದರಾಮಯ್ಯ ರೀತಿ ಪ್ರತಿಭಟನೆ ಮಾಡ್ತಿದ್ದಾರಾ. ಇನ್ನು ಬಂಡೆ ಸಿದ್ದರಾಮಯ್ಯ ಜತೆಗಿದೆ, ಆದ್ರೆ ಸಿದ್ದು ತಲೆ ಮೇಲೆ ಬಂಡೆ ಬೀಳದಿದ್ರೆ ಸರಿ ಎಂದು ಬೆಂಗಳೂರಲ್ಲಿ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಗವರ್ನರ್ ಆಫೀಸ್ ರಾಜಕೀಯ ಕಚೇರಿ ಆಗಬಾರದು – ಡಿಸಿಎಂ ಡಿ.ಕೆ.ಶಿವಕುಮಾರ್..!