ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಸದುಪಯೋಗವನ್ನು ರಾಜ್ಯದ ಮಹಿಳೆಯರು ಪಡೆಯುತ್ತಿದ್ದಾರೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿರುವುದು ತಿಳಿದು ಬಂದಿತ್ತು. ಇದೀಗ ಬಡ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದ ಸಹಾಯದಿಂದ ತನ್ನ ಗಂಡನ ಕಣ್ಣಿನ ಆಪರೇಷನ್ ಮಾಡಿರುವ ಘಟನೆಯೊಂದು ನಡೆದಿದೆ.
ಗೃಹಲಕ್ಷ್ಮೀ ಯೋಜನೆಯಿಂದ ಬೆಳಗಾವಿಯ ಅನಗೋಳದ ಅನಿತಾ ಪತಿ ಚಂದ್ರಶೇಖರ್ ಬಡಿಗೇರಗೆ ಕಣ್ಣಿನ ಆಪರೇಷನ್ ಮಾಡಿಸಿದ್ದಾರೆ. ಅನಿತಾ ಪತಿ ಚಂದ್ರಶೇಖರ್ ದೃಷ್ಠಿ ದೋಷದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅನಿತಾ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟಿದ್ದರು.
ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್ ಅವರ ಕಣ್ಣಿನ ಆಪರೇಷನ್ ಮಾಡಿಸಿದ್ದಾರೆ. ಪತಿಯ ಕಣ್ಣಿನ ಆಪರೇಷನ್ಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದಕ್ಕೆ ಅನಿತಾ, ವಿಡಿಯೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ : ಕಿಚ್ಚನ ಹುಟ್ಟುಹಬ್ಬಕ್ಕೆ ‘ಮ್ಯಾಕ್ಸ್’ ಚಿತ್ರದ ಫಸ್ಟ್ ಸಾಂಗ್ ರಿಲೀಸ್ – ರಡಗ್ ಆಗಿ ಎಂಟ್ರಿ ಕೊಟ್ಟ ಬಾದ್ಷಾ..!