ಮೈಸೂರು : ಮುಡಾ ಸಂಕಷ್ಟ ಎದುರಿಸುತ್ತಿರುವ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯ ಮೊರೆ ಹೋಗಲಿದ್ದಾರೆ. ಸಿಎಂ ಸಿದ್ದು ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಹೈಕೋರ್ಟ್ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿರೋದ್ರಿಂದ ಇದೀಗ ಸಿಎಂ ಸಿದ್ದರಾಮಯ್ಯ ನಿರಾಳವಾಗಿದ್ದಾರೆ. ನಿನ್ನೆಯೇ ಮೈಸೂರಿಗೆ ತೆರಳಬೇಕಿದ್ದ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ನಲ್ಲಿ ಕೇಸ್ ಇದ್ದ ಕಾರಣ ಸಂಜೆ ನಂತರ ಪ್ರಯಾಣ ಬೆಳೆಸಿದ್ದಾರೆ. ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದು, ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ಕೂಡ ಮಾಡಲಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಕಾರಿಗೆ BMTC ಬಸ್ ಡಿಕ್ಕಿ – ಕೂದಲೆಳೆಯಲ್ಲಿ ಪಾರಾದ ಡೆಲಿವರಿ ಬಾಯ್..!
Post Views: 59