Download Our App

Follow us

Home » ಜಿಲ್ಲೆ » ಬಾಗಲಕೋಟೆಯಲ್ಲಿ ಎರಡು ಬೈಕ್​ಗಳ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!

ಬಾಗಲಕೋಟೆಯಲ್ಲಿ ಎರಡು ಬೈಕ್​ಗಳ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!

ಬಾಗಲಕೋಟೆ : ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ನವನಗರದ ಅಬಕಾರಿ ಇಲಾಖೆಯ ಸಮೀಪ ತಡರಾತ್ರಿ ಜರುಗಿದೆ.

ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಇಬ್ಬರು ಗೆಳತಿಯರು ದುರ್ಮರಣ ಹೊಂದಿದ್ದಾರೆ. ಇನ್ನೊಂದು ಬೈಕ್​​ನಲ್ಲಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನ ದಂತ ವೈದ್ಯೆ ಕೃತಿಕಾ ಒಂಟಕುದರಿ(32), ಸ್ನೇಹಿತೆ ಸಾಫ್ಟೆವೇರ್ ಇಂಜಿನಿಯರ್ ರಜನಿ ಒಂಟಕುದರಿ (34), ಹಾಗೂ ನವನಗರದ ನಿವಾಸಿ ಅಭಿಷೇಕ್ ಬಂಡಿವಡ್ಡರ್ ಎಂದು ಗುರುತಿಸಲಾಗಿದೆ.

ಬೈಕ್​ನಲ್ಲಿ ಕಾಳಿದಾಸ್ ಸರ್ಕಲ್​ನಿಂದ ಯುವಕರು ಬಸ್ ನಿಲ್ದಾಣದ ಕಡೆಗೆ ಹೊರಟಿದ್ದರು. ಬೈಕ್ ವೇಗವಾಗಿ ಇದ್ದಿದ್ದರಿಂದ ನಿಯಂತ್ರಣಕ್ಕೆ ಸಿಗದೆ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಜನಿ, ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕೃತಿಕಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಸ್ಥಳಕ್ಕೆ ನವನಗರದ ಪೊಲೀಸ್ ಠಾಣೆಯ ‌ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನಾಡಿನೆಲ್ಲೆಡೆ ಇಂದು ಗೌರಿ-ಗಣೇಶ ಹಬ್ಬದ ಸಂಭ್ರಮ : ಹೂ-ಹಣ್ಣು ದುಬಾರಿ, ಮಾರ್ಕೆಟ್​ಗಳಲ್ಲಿ ಜನವೋ ಜನ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here