ಬೆಂಗಳೂರು : ಐಟಿ-ಸಿಟಿಯಲ್ಲಿ ನಿಲ್ಲದ ಪುಂಡರ ಹಾವಳಿ. ಹೃದಯಭಾಗ ಮೆಜೆಸ್ಟಿಕ್ನಲ್ಲೇ KSRTC ಬಸ್ ಮೇಲೆ ದಾಳಿ ಮಾಡಿದ್ದಾರೆ. ಎರಡು KSRTC ಬಸ್ಗಳ ಗ್ಲಾಸ್ ಪುಡಿಪುಡಿ ಮಾಡಿ, ಪುಂಡರು ಮಿಡ್ನೈಟ್ನಲ್ಲಿ ಅಟ್ಟಹಾಸ ಮೆರೆದಿದ್ದಾರೆ.
ಬೆಂಗಳೂರು-ಮೈಸೂರು ಮಾರ್ಗದ ಬಸ್ಗಳಿಗೆ ದೊಣ್ಣೆಯಿಂದ ದಾಳಿ ಮಾಡಿದ್ದು, ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ. ಇಬ್ಬರನ್ನೂ ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ಕಾರು, ಆಟೋಗಳ ಗ್ಲಾಸ್ ಪೀಸ್, ಪೀಸ್ ಆಗಿದ್ದು, ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಆಟೋದಲ್ಲಿದ್ದ ಐವರು ರಾಡ್ಗಳನ್ನು ಇಟ್ಟುಕೊಂಡಿದ್ದ ಆರೋಪ ವ್ಯಕ್ತವಾಗಿದೆ.
ಇದನ್ನೂ ಓದಿ : ಟೆಂಟ್ನಲ್ಲಿ 2 ಗೊಂಬೆ ಇಟ್ಟು ಇದೇ ಶ್ರೀರಾಮ ಅಂದಿದ್ರು : ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ..!
Post Views: 268