ಬೆಂಗಳೂರು : ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಆರೋಪದಿಂದ ತಪ್ಪಿಸಿಕೊಳ್ಳುವ ದುರಾಲೋಚನೆಯಿಂದ ನಟ ದರ್ಶನ್ ಪೋಟೋ ವೈರಲ್ ಮಾಡುವ ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಹೇಳಿದ್ದರು. ಇದೀಗ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.
ದರ್ಶನ್, ಮುಡಾ ಇದೆಲ್ಲವನ್ನೂ ಬಿಡಿ, ಕೈಮುಗಿದು ಕೇಳ್ಕೋತೀನಿ ಮಹಾದಾಯಿಗೆ ಅನುಮತಿ ಕೊಡಿಸಿ. ಮಹಾದಾಯಿ ವಿಚಾರದಲ್ಲಿ ಏನ್ ತೊಂದ್ರೆಯಾಗಿದೆ ನೋಡಿ ಅದಕ್ಕೊಂದು ದುಡ್ಡು ಕೊಡಿಸ್ರಪ್ಪ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಡಿಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.
ದರ್ಶನ್ ಪ್ರಕರಣದಲ್ಲಿ ನ್ಯಾಯಾಲಯ ಕೊಟ್ಟಿರುವ ದಾಖಲೆಯನ್ನು ಬಹಿರಂಗ ಪಡಿಸುವ ಕಾರ್ಯವನ್ನು ಸರ್ಕಾರ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : ಸೆಟ್ಟೇರಿತು ರಮೇಶ್ ಅರವಿಂದ್-ಗಣೇಶ್ ಹೊಸ ಸಿನಿಮಾ – your’s sincerely ‘ರಾಮ್’ ಫಸ್ಟ್ ಲುಕ್ ಟೀಸರ್ ರಿಲೀಸ್..!