ಬೆಂಗಳೂರು : ಸಂಜಯನಗರದಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ನಡೆದಿದೆ. ವರುಣ್ ಕೊಲೆಯಾದವನು. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ರೂಮ್ ಮೇಟ್ನಿಂದಲೇ ವರುಣ್ ಕೊಲೆಯಾಗಿದ್ದಾನೆ. ವರುಣ್ ಹಾಗೂ ದಿವೇಶ್ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ಮೇಲ್ನೋಟಕ್ಕೆ ಇದೇ ವಿಚಾರಕ್ಕೆ ಕೊಲೆಯಾಗಿರುವ ಮಾಹಿತಿ ಲಭ್ಯವಾಗಿದೆ. ಶನಿವಾರ ಇಬ್ಬರ ನಡುವೆ ಪ್ರೀತಿ ವಿಚಾರಕ್ಕೆ ಗಲಾಟೆ ಆಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದೆ. ಸಿಟ್ಟಿನಲ್ಲಿ ದಿವೇಶ್ ವರುಣ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿ ಸ್ಥಳದಲ್ಲೇ ಇದ್ದ ಕೊಲೆ ಆರೋಪಿ ದಿವೇಶ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಕೊಲೆಗೆ ಕಾರಣ ಹುಡುಗಿ ವಿಚಾರ ಎಂದು ತಿಳಿದು ಬಂದಿದೆ. ವರುಣ್ ಬಾಗಲೂರಿನಲ್ಲಿ ಸೇಫ್ಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ. ಸಂಜಯ್ ನಗರದ ಗೆದ್ದಲಹಳ್ಳಿ ಬಾಡಿಗೆ ಮನೆಯಲ್ಲಿ ಒಂದೇ ರೂಮ್ನಲ್ಲಿ ಒಟ್ಟು ನಾಲ್ವರು ವಾಸಿಸುತ್ತಿದ್ದರು ಎನ್ನಲಾಗಿದೆ..
ಇದನ್ನೂ ಓದಿ : ಡಾಲಿ ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ಗೆ ಕುಂಬಳಕಾಯಿ ಪ್ರಾಪ್ತಿ..! –