Download Our App

Follow us

Home » ಅಪರಾಧ » ಮತ್ತೆ ಪರಪ್ಪನ ಅಗ್ರಹಾರಕ್ಕೆ ಮಾಜಿ ಮಂತ್ರಿ ಮುನಿರತ್ನ – ಅ.19ರವೆರೆಗೆ ನ್ಯಾಯಾಂಗ ಬಂಧನ..!

ಮತ್ತೆ ಪರಪ್ಪನ ಅಗ್ರಹಾರಕ್ಕೆ ಮಾಜಿ ಮಂತ್ರಿ ಮುನಿರತ್ನ – ಅ.19ರವೆರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮಂತ್ರಿ ಮುನಿರತ್ನಗೆ ಕೋರ್ಟ್ ಮತ್ತೆ ​14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು SIT ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ ಅ.19ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ SIT ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಇದನ್ನೂ ಓದಿ : ಸಸ್ಪೆನ್ಸ್‌ ಥ್ರಿಲ್ಲರ್‌ ‘ವೃತ್ತ’ ಚಿತ್ರದ ಟೀಸರ್ ರಿಲೀಸ್ – ಹೊಸಬರ ಕಥೆಗೆ ಮನಸೋತ ನೀನಾಸಂ ಸತೀಶ್‌..!

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here