KSHRC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ!

ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ (KSHRC) ಅಧ್ಯಕ್ಷರಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರು ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ್ದ ಏಕಸದಸ್ಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದರು.

ಇದನ್ನೂ ಓದಿ : ರಾಮನಗರ ಡಿಸಿ ಯಶವಂತ್ ವಿ. ಗುರುಕರ್ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

Btv Kannada
Author: Btv Kannada

Leave a Comment

Read More

Read More