Download Our App

Follow us

Home » ಸಿನಿಮಾ » ದೇವರಾಜ್ ಆರ್ ನಿರ್ಮಾಣದ ‘ದೂರ ತೀರ ಯಾನ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ..!

ದೇವರಾಜ್ ಆರ್ ನಿರ್ಮಾಣದ ‘ದೂರ ತೀರ ಯಾನ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ..!

ಡಿ ಕ್ರಿಯೇಷನ್ಸ್ ಬ್ಯಾನರ್​ ಅಡಿಯಲ್ಲಿ ದೇವರಾಜ್ ಆರ್ ನಿರ್ಮಾಣದ ‘ದೂರ ತೀರ ಯಾನ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಮಂಸೋರೆ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ತಲೆಮಾರಿನ ಸಂಗೀತಮಯ ಪ್ರೇಮಕಥೆ ಇದಾಗಿದ್ದು, ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ನಟಿಸುತ್ತಿದ್ದಾರೆ.

ಶೇಖರ್ ಚಂದ್ರು ಅವರ ಛಾಯಾಗ್ರಹಣ, ಬಕ್ಕೇಶ್ ಮತ್ತು ಕಾರ್ತಿಕ್ ಸಂಗೀತ, ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಅವರ ಗೀತ ಸಾಹಿತ್ಯ, ನಾಗೇಂದ್ರ ಕೆ ಉಜ್ಜನಿ ಸಂಕಲನ, ಸರವಣ ಅವರ ಕಲಾ ನಿರ್ದೇಶನ ಹಾಗೂ ವಿವಿಡ್ ಐ ನಿರ್ಮಾಣ ವಿನ್ಯಾಸದ ಹೊಣೆ ಈ ಸಿಮಾಗಿದೆ. ಇನ್ನು ವಿಶೇಷ ಪಾತ್ರಗಳಲ್ಲಿ ಹಲವರು ಪ್ರಮುಖ ನಟಿ-ನಟರು ನಟಿಸಿದ್ದು, ಅವರ ವಿವರಗಳನ್ನು ಸದ್ಯದಲ್ಲೆ ತಿಳಿಸುವುದಾಗಿ ಚಿತ್ರತಂಡ ಹೇಳಿದೆ.

ಇದನ್ನೂ ಓದಿ :  ‘ಮಿಸ್ಟರ್‌ ರಾಣಿ’ ಚಿತ್ರದ ಟೀಸರ್​ಗೆ ವೀಕ್ಷಕರು ಫಿದಾ​.. ಹೀರೊಯಿನ್ ಆಗಿ ದೀಪಕ್ ಸುಬ್ರಮಣ್ಯ ಮಿಂಚಿಂಗ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಮುಂದುವರಿದ ವರುಣಾರ್ಭಟ – ಮಳೆ ಅಬ್ಬರಕ್ಕೆ ಹಲವೆಡೆ ಧರೆಗುರುಳಿದ ಬೃಹತ್​ ಮರಗಳು..!

ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರು ಭಾರೀ ಮಳೆಗೆ ಅಕ್ಷರಶಃ ನಲುಗುತ್ತಿದೆ. ಸಂಜೆ ಸುರಿಯುತ್ತಿರೋ ವರ್ಷಧಾರೆಗೆ ಬೆಂಗಳೂರಿಗರು ತತ್ತರಿಸುತ್ತಿದ್ದರೇ, ಇನ್ನೊಂದೆಡೆ ಮಳೆ ಅಬ್ಬರಕ್ಕೆ ಹಲವೆಡೆ ಬೃಹತ್​ ಮರಗಳು

Live Cricket

Add Your Heading Text Here