Download Our App

Follow us

Home » ಸಿನಿಮಾ » ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ – ಬೆಚ್ಚಿಬಿದ್ದ ಪ್ರೇಕ್ಷಕರು..!

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ – ಬೆಚ್ಚಿಬಿದ್ದ ಪ್ರೇಕ್ಷಕರು..!

ಬಿಗ್‌ ಬಾಸ್ ಕನ್ನಡ ಸೀಸನ್ 11 ಅದ್ಧೂರಿಯಾಗಿ ಆರಂಭ ಆಗಿದೆ. 15 ಮಂದಿ ಸದಸ್ಯರು ಬಿಗ್ ಬಾಸ್ ಮನೆಯೊಳಗಿದ್ದು, ಆಟವನ್ನು ಮುಂದುವರೆಸಿದ್ದಾರೆ. ಕನ್ನಡದಂತೆಯೇ ಬಿಗ್ ಬಾಸ್ ತೆಲುಗು 8 ಕೂಡ ಆರಂಭ ಆಗಿದ್ದು, ಟಾಲಿವುಡ್ ಮನ್ಮಥ ನಾಗಾರ್ಜುನ ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋ ಅನ್ನು ನಡೆಸಿಕೊಡುತ್ತಿದ್ದಾರೆ. ಬಿಗ್ ಬಾಸ್‌ನಲ್ಲಿರುವಾಗಲೇ ಖ್ಯಾತ ಯೂಟ್ಯೂಬರ್ ಗಂಗವ್ವಗೆ ಹೃದಯಾಘಾತವಾಗಿದೆ.

ಬಿಗ್ ಬಾಸ್ ತೆಲುಗು ಸೀಸನ್ 8ರಲ್ಲಿ ಈ ಬಾರಿಗೆ 60 ವರ್ಷದ ಮಹಿಳೆಯೊಬ್ಬರು ಎಂಟ್ರಿ ಕೊಟ್ಟಿದ್ದರು. ತೆಲುಗಿನ ಜನಪ್ರಿಯ ಯೂಟ್ಯೂಬರ್ ಗಂಗಮ್ಮ ಅವರನ್ನು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಕೊಡಿಸಲಾಗಿತ್ತು. ಇದೇ ಸ್ಪರ್ಧಿ ಮನೆಯೊಳಗೆ ಇರುವಾಗಲೇ ಹೃದಯಾಘಾತವಾಗಿದೆ ಎಂಬ ಸುದ್ದಿ ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತೆಲುಗು ರಾಜ್ಯಗಳಲ್ಲಿ ಗಂಗವ್ವ ಸಿಕ್ಕಾಪಟ್ಟೆ ಫೇಮಸ್. ಈ ಕಾರಣಕ್ಕೆ 60 ವರ್ಷದ ಗಂಗವ್ವರನ್ನು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಯೊಳಗೆ ಕಳುಹಿಸಿಕೊಡಲಾಗಿತ್ತು. ಉಳಿದ ಸ್ಪರ್ಧಿಗಳಿಗೆ ಪೈಪೋಟಿ ಕೊಡುತ್ತಿದ್ದ ಗಂಗವ್ವಗೆ ಸೋಮವಾರ ರಾತ್ರಿ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಶೋ ನಿಂದ ಹೊರಗೆ ಕರೆದುಕೊಂಡು ಬಂದಿದ್ದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿರುತೆರೆ ವೀಕ್ಷಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಗಂಗವ್ವ ಬಿಗ್ ಬಾಸ್ ಮನೆಯೊಳಗೆ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದರು. ಬಿಗ್ ಬಾಸ್ ತೆಲುಗು ಸೀಸನ್ 4ರಲ್ಲಿ ಭಾಗವಹಿಸಿದ್ದರು. ಆದರೆ, 7ನೇ ವಾರಕ್ಕೆ ಮನೆಯಿಂದ ಹೊರಬಿದ್ದಿದ್ದರು. ಆರೋಗ್ಯ ಹದಗೆಟ್ಟಿದ್ದರಿಂದ ವೈದ್ಯರು ಸಲಹೆ ಮೇರೆಗೆ ಮನೆಯಿಂದ ಹೊರಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ : ಬಿಬಿಎಂಪಿಗೆ ನನ್ನನ್ನೇ ಮೇಯರ್ ಎಂದು ಘೋಷಿಸಿ – ಹೈಕೋರ್ಟ್​ಗೆ ನಾಗರಿಕರೊಬ್ಬರ ವಿಚಿತ್ರ ಬೇಡಿಕೆ..!

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here