Download Our App

Follow us

Home » ರಾಜಕೀಯ » ಬಿಜೆಪಿಗೆ ಗುಡ್​ ಬೈ – ಸಿಎಂ ಸಿದ್ದು ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಸಿ.ಪಿ ಯೋಗೇಶ್ವರ್..!

ಬಿಜೆಪಿಗೆ ಗುಡ್​ ಬೈ – ಸಿಎಂ ಸಿದ್ದು ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಸಿ.ಪಿ ಯೋಗೇಶ್ವರ್..!

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಿ.ಪಿ ಯೋಗೇಶ್ವರ್ ಬಿಜೆಪಿ MLC ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಸಿ.ಪಿ ಯೋಗೇಶ್ವರ್ ಮುಂದಿನ ನಡೆ ಏನು ಅನ್ನೋ ಪ್ರಶ್ನೆ ಹುಟ್ಟಿಕೊಂಡಿತು. ಬಿಜೆಪಿಯಲ್ಲೇ ಇರುತ್ತಾರಾ? ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಾರಾ ಎಂಬ ಚರ್ಚೆಗಳು ಹುಟ್ಟಿಕೊಂಡಿದ್ದವು. ಇದೀಗ ಯೋಗೇಶ್ವರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಯೋಗೇಶ್ವರ್ ವಾಟ್ಸಾಪ್​​ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸಿ.ಪಿ ಯೋಗೇಶ್ವರ್ ಇಂದು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಬಳಿಕ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೀಗ ಚನ್ನಪಟ್ಟಣ ರಾಜಕೀಯ ಅಖಾಡದಲ್ಲಿ ಮೇಜರ್​ ಟ್ವಿಸ್ಟ್​ ಸಿಕ್ಕಿದ್ದು, ಸ್ವತಂತ್ರ ದಾಳ ಉರುಳಿಸಿದ್ದ ಯೋಗೇಶ್ವ ಸಡನ್​​​​​​ ಗೇಮ್​ ಪ್ಲಾನ್​​ ಮಾಡಿದ್ದಾರೆ.

ಡಿಕೆಶಿ ಸೈಲೆಂಟ್​ ಆಟಕ್ಕೆ ಬಿಜೆಪಿ-ಜೆಡಿಎಸ್ ನಾಯಕರೇ ಶಾಕ್​​​​ ಆಗಿದ್ದಾರೆ. ಕಾಂಗ್ರೆಸ್​ನಿಂದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್ ಫಿಕ್ಸ್​ ಆಗಿದೆ. ಇಂದು ಅಥವಾ ನಾಳೆಯೇ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಲಿದೆ.

ಇದನ್ನೂ ಓದಿ : ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ – ಬೆಚ್ಚಿಬಿದ್ದ ಪ್ರೇಕ್ಷಕರು..!

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here