ಬೆಂಗಳೂರು : ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮಾತನಾಡಿ, JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ. ಯಾವುದೇ ಷರತ್ತು ಹಾಕದೇ ನಾನು ಕಾಂಗ್ರೆಸ್ ಸೇರಿದ್ದೇನೆ. ಎಲ್ಲರ ಜೊತೆ ಸೇರಿ ಕಾಂಗ್ರೆಸ್ ಪಕ್ಷ ಕಟ್ಟುತ್ತೇವೆ ಎಂದಿದ್ದಾರೆ.
ಇನ್ನು ಡಿಕೆಶಿ ನೇತೃತ್ವದಲ್ಲಿ ರಾಮನಗರ ಅಭಿವೃದ್ಧಿಯಾಗ್ತಿದೆ. ಜಿಲ್ಲೆಯ ಒಳಿತಿಗಾಗಿ ನಾನು ಕಾಂಗ್ರೆಸ್ ಬಂದಿರುವೆ. ಎಲ್ಲರ ಜೊತೆ ಒಟ್ಟಾಗಿ ಕೆಲಸ ಮಾಡೋಣ. ಕಾಂಗ್ರೆಸ್ ಕಾರ್ಯಕರ್ತನಾಗಿ ದುಡಿಯುವೆ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ ಮನೆಗೆ ವೈಲ್ಡ್ಕಾರ್ಡ್ ಎಂಟ್ರಿ ಕೊಡ್ತಾರಾ ರಂಜಿತ್.. ಈ ಬಗ್ಗೆ ಹೇಳಿದ್ದೇನು?