ಮಂಗಳೂರು : ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ವಿಶ್ವ ಹಿಂದೂ ಪರಿಷತ್ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರು ವಾಕ್ ಸಮರ ಮಾಡಿಕೊಂಡಿದ್ದಾರೆ.
ಭೂಮಿ ಪೂಜೆಗೆ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರಿಂದ ಕೆಲವರು ಆಕ್ರೋಶ ಹೊರಹಾಕಿದರು. ಅರುಣ್ ಪುತ್ತಿಲ ಆಗಮಿಸಬಾರದು ಎಂದು ತಡೆಯೊಡ್ಡಿದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲೊಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಿದ್ದರು.
ಈ ವೇಳೆ ಪುತ್ತಿಲ ಆಂಡ್ ಟೀಂ ಹಿಂದೂ ಸಂಘಟನೆಗಳಿಗೆ ಹಾಗೂ ಸಂಘ ಪರಿವಾರಕ್ಕೆ ನಿಂದಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದಾದ ಬಳಿಕ ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬಿಕ್ಕಟ್ಟು ಶಮನಗೊಂಡಿತ್ತು. ಆದ್ರೆ ವಿಎಚ್ ಪಿ ನಡುವಿನ ಸಮರ ಹಾಗೆಯೇ ಉಳಿದಿತ್ತು.
ಇದನ್ನೂ ಓದಿ : ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ – ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ..!
Post Views: 90