ಬೆಂಗಳೂರು : ಬಾಬುಸಾಬ್ಪಾಳ್ಯ ಕಟ್ಟಡ ದುರಂತ ಕೇಸ್ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್ ಆದೇಶ ಹೊರಡಿಸಿದ್ದಾರೆ.
ನಿಗದಿ ಅವಧಿಯಲ್ಲಿ ನೋಟಿಸ್ ನೀಡಿದ್ರು, ಅಕ್ರಮ ಕಟ್ಟಡ ಎಂದು ತಿಳಿದ್ರು ತೆರವು ಮಾಡಿಲ್ಲ. ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆ ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರ ವರದಿ ಮೇರೆಗೆ AE ವಿನಯ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಈವರೆಗೆ ಒಟ್ಟು 13 ಜನರನ್ನ ರಕ್ಷಣೆ ಮಾಡಿದ್ದು ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಈ ದುರಂತದಲ್ಲಿ ಸಾವನ್ನಪ್ಪಿರೋರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಉದ್ಯಮಿ ವಿಜಯ್ ಟಾಟಾಗೆ ಬೆದರಿಕೆಯೊಡ್ಡಿದ ಆರೋಪ – ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ MLC ರಮೇಶ್ ಗೌಡಗೇ ರಿಲೀಫ್..!
Post Views: 107