ಇಂದು ಆರ್​ಸಿಬಿ VS ಜಿಟಿ ಹೈವೋಲ್ಟೇಜ್ ಪಂದ್ಯ – ಬೆಂಗಳೂರಲ್ಲಿ ಸೆಲೆಬ್ರೇಷನ್​ಗೆ ಬ್ರೇಕ್​​.. ಫ್ಯಾನ್ಸ್​ಗೆ ಪೊಲೀಸರಿಂದ ಖಡಕ್​​ ವಾರ್ನಿಂಗ್!

ಬೆಂಗಳೂರು : IPL ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಆರ್​ಸಿಬಿ VS ಜಿಟಿ ಮುಖಾಮುಖಿಯಾಗಲಿದೆ. ​​ 

ಬೆಂಗಳೂರು ಮತ್ತು ಗುಜರಾತ್​​ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಖಡಕ್ ಮಾರ್ಗಸೂಚಿ ಪ್ರಕಟಿಸಿದ್ದಾರೆ. 

ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

  • ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ
  • ಅನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸುವಂತಿಲ್ಲ
  • ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು
  • ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಂತಿ, ಶಿಸ್ತು ಪಾಲಿಸಬೇಕು
  • ಸಂಚಾರ ವಿಭಾಗದ ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು
  • ಬೈಕ್ ರ್ಯಾಲಿ, ಅತಿವೇಗದ ಚಾಲನೆ, ಸ್ಟಂಟ್, ಹಾರ್ನ್ ಮಾಡುವಂತಿಲ್ಲ
  • ರಸ್ತೆ ತಡೆದು ಸಂಭ್ರಮಾಚರಣೆ ಮಾಡುವಂತಿಲ್ಲವೆಂದು ಪೊಲೀಸರ ಸೂಚನೆ
  • ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಬಾರದು
  • ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್ ಹಾಕುವಂತಿಲ್ಲ
  • ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳಬಾರದು
  • ಫಲಿತಾಂಶದ ಹೆಸರಿನಲ್ಲಿ ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸಬಾರದು

ಇದನ್ನೂ ಓದಿ : ಡಿಕೆ ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ 2028ರಲ್ಲಿ ಅಧಿಕಾರಕ್ಕೆ – ಕೆ.ಸಿ. ವೇಣುಗೋಪಾಲ್!

Btv Kannada
Author: Btv Kannada

Leave a Comment

Read More

Read More