Download Our App

Follow us

Home » ರಾಜಕೀಯ » ಚನ್ನಪಟ್ಟಣ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿ.ಪಿ ಯೋಗೇಶ್ವರ್​..!

ಚನ್ನಪಟ್ಟಣ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿ.ಪಿ ಯೋಗೇಶ್ವರ್​..!

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ರ್ಯಾಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ರ್ಯಾಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ರ್ಯಾಲಿಯಲ್ಲಿ ಪಾಲ್ಗೊಂಡರು.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಸಿ.ಪಿ ಯೋಗೇಶ್ವರ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ರಾಮಲಿಂಗಾ ರೆಡ್ಡಿ, ಚಲುವರಾಯ ಸ್ವಾಮಿ ಹಾಗೂ ಡಿಕೆ ಸುರೇಶ್, ಹೆಚ್.ಎಂ ರೇವಣ್ಣ ಸೇರಿದಂತೆ ಕಾಂಗ್ರೆಸ್​ನ ಇತರೆ ನಾಯಕರು ಹಾಜರಿದ್ದರು. ಜನರು ಕೂಡ ಹೆಚ್ಚಿನ ಮಟ್ಟದಲ್ಲಿ ನಾಮಪತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಹೊಸ ಗೆಟಪ್‌ನಲ್ಲಿ ಪ್ರಭಾಸ್ – ‘ದಿ ರಾಜಾ ಸಾಬ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್​​..!

Leave a Comment

DG Ad

RELATED LATEST NEWS

Top Headlines

‘S/O ಮುತ್ತಣ್ಣ’ ಚಿತ್ರದ ಟೀಸರ್ ರಿಲೀಸ್.. ಪ್ರಣಮ್​​ ದೇವರಾಜ್ ಚಿತ್ರಕ್ಕೆ ಶಿವಣ್ಣ ಸಾಥ್..!

ದೇವರಾಜ್ ಎರಡನೇ ಪುತ್ರ ಯಂಗ್ ಡೈನಾಮಿಕ್ ಪ್ರಣಮ್​​ ದೇವರಾಜ್ ನಾಯಕನಾಗಿ ನಟಿಸಿರುವ ಸಿನಿಮಾ ‘S/O ಮುತ್ತಣ್ಣ’ ಸೆಟ್ಟೇರಿದ ದಿನದಿಂದಲೂ ಟೈಟಲ್ ಹಾಗೂ ಕಥಾಹಂದರದ ಮೂಲಕವೇ ಕುತೂಹಲ ಹೆಚ್ಚಿಸಿದೆ.

Live Cricket

Add Your Heading Text Here