Download Our App

Follow us

Home » ರಾಜಕೀಯ » ಚನ್ನಪಟ್ಟಣ ರಣರಂಗದಲ್ಲಿ ಸೈನಿಕನ ವಿರುದ್ಧ ತೊಡೆ ತಟ್ಟಲು ಕಣಕ್ಕಿಳಿದ ನಿಖಿಲ್​ ಕುಮಾರಸ್ವಾಮಿ..!

ಚನ್ನಪಟ್ಟಣ ರಣರಂಗದಲ್ಲಿ ಸೈನಿಕನ ವಿರುದ್ಧ ತೊಡೆ ತಟ್ಟಲು ಕಣಕ್ಕಿಳಿದ ನಿಖಿಲ್​ ಕುಮಾರಸ್ವಾಮಿ..!

ಬೆಂಗಳೂರು :  ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಸರು ಅಂತಿಮವಾಗಿದೆ. ಅಳೆದು ತೂಗಿ ಲೆಕ್ಕ ಹಾಕಿದ ಜೆಡಿಎಸ್​​ ಮತ್ತು ಬಿಜೆಪಿ ನಾಯಕರು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆ ಹಾಕಿದ್ದಾರೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕಳೆದ ಹಲವು ದಿನಗಳಿಂದ ಗೊಂದಲವಾಗಿ ಮಾರ್ಪಟ್ಟಿದ್ದ ಅಭ್ಯರ್ಥಿ ಆಯ್ಕೆ ಸಂಬಂಧ, ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್​​ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಿ.ಪಿ ಯೋಗೇಶ್ವರ್​​ ಮತ್ತು ನಿಖಿಲ್​​ ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿನ ಯುದ್ದ ನಡೆಯಲಿದೆ.

ಇದನ್ನೂ ಓದಿ : ಕಾರ್ಯಕರ್ತರಿಗೆ ತಲೆಬಾಗಿ ನಿಖಿಲ್​ ಹೆಸರು ಫೈನಲ್​ – ಹೆಚ್​ಡಿಕೆ ಸ್ಪಷ್ಟನೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here