ಬೆಂಗಳೂರು : ಮುಡಾ ಹಗರಣದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದು ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶದ ಒಂದು ತಿಂಗಳ ನಂತರ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠ ನೀಡಿರುವ ಆದೇಶ ದೋಷಪೂರಿತ, ಪೀಠದ ಆದೇಶ ರದ್ದು ಮಾಡಿ ಎಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಈಗಾಗಲೇ ಲೋಕಾ ಪೊಲೀಸ್ ಮುಡಾ ಸೈಟ್ ತನಿಖೆ ಮಾಡ್ತಿದ್ದಾರೆ.
ರಾಜ್ಯಪಾಲರ ಪೂರ್ವಾನುಮತಿಯೇ ನಿರಂಕುಶ, ಅಸಂವಿಧಾನಿಕ. ರಾಜ್ಯಪಾಲರ ಆದೇಶ ಪುರಸ್ಕರಿಸಿದ ಕೋರ್ಟ್ ತೀರ್ಪು ದೋಷಪೂರಿತ, ಅಪ್ರಸ್ತುತ ಸತ್ಯಗಳನ್ನು ಆಧರಿಸಿ ತೀರ್ಪು ನೀಡಲಾಗಿದೆ.
ಕಾನೂನಾತ್ಮಕ ಅಂಶಗಳನ್ನು ಇಲ್ಲಿ ನಿರ್ಲಕ್ಷಿಸಲಾಗಿದೆ, ಏಕಸದಸ್ಯ ಪೀಠ ಕಾನೂನು ಬಾಹಿರ ಆದೇಶವನ್ನು ನೀಡಿದೆ ಎಂದು ಸಿಎಂ ತಕರಾರು ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ – ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ಅರೆಸ್ಟ್..!