Download Our App

Follow us

Home » ಸಿನಿಮಾ » ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರದ ಎರಡನೇ ಸಾಂಗ್ ರಿಲೀಸ್..!

ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರದ ಎರಡನೇ ಸಾಂಗ್ ರಿಲೀಸ್..!

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇದೇ ಅಕ್ಟೋಬರ್‌ 31ರಂದು ಬಿಡುಗಡೆಯಾಗಲಿದೆ. ರುಧಿರ ಧಾರಾ ಹಾಡಿನ ಬಳಿಕ ಬಘೀರ ಸಿನಿಮಾದಿಂದ ಇದೀಗ ಎರಡನೇ ಹಾಡು ರಿಲೀಸ್‌ ಆಗಿದೆ. ಮೆಲೋಡಿಯ ಗುಂಗು ಹಿಡಿಸುವ “ಪರಿಚಯವಾದೆ..” ಹಾಡು ಕಿವಿಗಿಂಪು ನೀಡುವುದಷ್ಟೇ ಅಲ್ಲದೆ, ನಾಯಕ ಮತ್ತು ನಾಯಕಿಯ ಕೆಮಿಸ್ಟ್ರಿ ಈ ಹಾಡಿನಲ್ಲಿ ಸಖತ್ ವರ್ಕೌಟ್‌ ಆಗಿದೆ.

ಹಾಡಿನಲ್ಲಿ ನಾಯಕ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಮತ್ತು ನಾಯಕಿ ರುಕ್ಮಿಣಿ ವಸಂತ್‌ ಇಬ್ಬರೂ ಅಷ್ಟೇ ಮುದ್ದಾಗಿ ಕಂಡಿದ್ದಾರೆ. ಖಡಕ್‌ ಪೊಲೀಸ್‌ ಪಾತ್ರದಲ್ಲಿ ಶ್ರೀಮುರಳಿ ಎದುರಾದರೆ, ವೈದ್ಯೆಯಾಗಿ ರುಕ್ಮಿಣಿ ವಸಂತ್‌ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಪರಿಚಯವಾದೆ.. ಹಾಡಿಗೆ ಪ್ರಮೋದ್ ಮರವಂತೆ ಅವರ ಹೃದಯಸ್ಪರ್ಶಿ ಸಾಹಿತ್ಯವಿದೆ. ರಿತೇಷ್‌ ಜಿ ರಾವ್‌ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹೊಂಬಾಳೆ ಫಿಲಂಸ್‌ನ ಬ್ಯಾನರ್‌ನಲ್ಲಿ ವಿಜಯ್ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈಗಾಗಲೇ ಹಲವು ಹಿಟ್‌ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಈ ಬಘೀರ ಸಿನಿಮಾಕ್ಕೆ ಕಥೆ ಬರೆದಿದ್ದಾರೆ. ಡಾ. ಸೂರಿ ಈ ಸಿನಿಮಾಕ್ಕೆ ನಿರ್ದೇಶನದ ಜತೆಗೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಎ ಜೆ ಶೆಟ್ಟಿ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದರೆ, ಚೇತನ್‌ ಡಿಸೋಜಾ ಸಾಹಸ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ : ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!

Leave a Comment

DG Ad

RELATED LATEST NEWS

Top Headlines

ಶತಕೋಟಿ ಒಡೆಯ ನಿಖಿಲ್ ಕುಮಾರಸ್ವಾಮಿ.. ಪುತ್ರನ ಹೆಸರಲ್ಲಿದೆ 11 ಲಕ್ಷ..!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು  ಘೋಷಿಸಿಕೊಂಡಿದ್ದಾರೆ.

Live Cricket

Add Your Heading Text Here