ಚನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಗುರುವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದರು. ಇದೀಗ ಎನ್ಡಿಎ ಅಭ್ಯರ್ಥಿ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಸಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಬಿ.ವೈ.ರಾಘವೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಡಾ.ಅಶ್ವತ್ಥ್ ನಾರಾಯಣ್ ಸಂಸದ ಯಧುವೀರ್ ಒಡೆಯರ್ ಹಾಗೂ ನಿಖಿಲ್ ಪತ್ನಿ ರೇವತಿ ಮೆರವಣಿಗೆಯಲ್ಲಿ ಸಾಥ್ ನೀಡಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ, ಕೆಂಗಲ್ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ರೋಡ್ ಶೋ ನಡೆಸಿದರು. ಇನ್ನು ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಅಷ್ಟೇ ಅಲ್ಲದೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ – 98 ಮಂದಿಗೆ ಜೀವಾವಧಿ ಶಿಕ್ಷೆ..!