ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್ ಹಿಟ್ ಪಟ್ಟ ಪಡೆದುಕೊಂಡಿದೆ. ಇತ್ತೀಚಿನ ಕೆಲ ದಿನಗಳಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ, ಕೃಷ್ಣ ಪ್ರಣಯ ಸಖಿ ಸಿನಿಮಾ ಒಳ್ಳೆಯ ಕಲೆಕ್ಷನ್ ಜತೆಗೆ ಜನಮೆಚ್ಚುಗೆಯನ್ನೂ ಪಡೆದಿತ್ತು. ಇದೀಗ ಈ ಸಿನಿಮಾ ಎಪ್ಪತ್ತೈದು ದಿನಗಳನ್ನು ಪೂರೈಸಿ, ಶತದಿನೋತ್ಸವದತ್ತ ಸಾಗುತ್ತಿದೆ.
ಈಗಲೂ ಕರ್ನಾಟಕದ ಹಲವು ಕಡೆ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತನ್ನು ದೂರ ಮಾಡಿರುವ ಈ ಚಿತ್ರ, ಫ್ಯಾಮಿಲಿ ಆಡಿಯನ್ಸ್ ನ ಮನ ಗೆದ್ದಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಹಾಡುಗಳಂತೂ ಸಾಮಾಜಿಕ ಜಾಲತಾಣಳಲ್ಲಿ ಹೊಸ ದಾಖಲೆಯನ್ನೇ ನಿರ್ಮಾಣ ಮಾಡಿದೆ.
ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಈ ಸಿನಿಮಾವನ್ನು ಶ್ರೀನಿವಾಸರಾಜು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಜೋಡಿಯಾಗಿ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ನಟಿಸಿದ್ದಾರೆ.
ಇನ್ನುಳಿದಂತೆ ರಂಗಾಯಣ ರಘು, ಶಶಿಕುಮಾರ್, ಸಾಧು ಕೋಕಿಲ, ಅವಿನಾಶ್, ಶ್ರುತಿ ಸೇರಿ ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿದೆ. ಇನ್ನು ಚಿತ್ರ ಎಪ್ಪತ್ತೈದು ದಿನಗಳನ್ನು ಪೂರೈಸಿರುವ ಈ ಸಂದರ್ಭದಲ್ಲಿ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಾಯಕ ಗಣೇಶ್, ಚಿತ್ರತಂಡಕ್ಕೆ ಮತ್ತು ಕನ್ನಡ ಕಲಾಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ : ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ – ಸಿನಿ ಪ್ರಿಯರಿಗಾಗಿ ಬರ್ತಿದೆ ಹೊಸ ಒಟಿಟಿ ಪ್ಲಾಟ್ಫಾರ್ಮ್..!