ನಿನ್ನೆಯ ಎಪಿಸೋಡಿನಲ್ಲಿ ಕೋಪ, ಆತ್ಮವಿಮರ್ಶೆ ನಂತರ ತನ್ನ ಸಹಸ್ಪರ್ಧಿಗಳ ಜೊತೆ ಮನಬಿಚ್ಚಿ ಮಾತನಾಡಿ ಹಗುರಾಗಿರುವ ಬಿಗ್ಬಾಸ್ ಮನೆಯ ಸದಸ್ಯರಿಗೆ ಇಂದೊಂದು ರಂಜನೀಯ ಟಾಸ್ಕ್ ಸಿಕ್ಕಿದೆ. ಅದೇನೆಂದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸೆರೆಯಾಗಿದೆ.
ಬಿಗ್ಬಾಸ್ ಮನೆಯೊಳಗೆ ರೇಡಿಯೋ ಸ್ಟೇಷನ್ ಸ್ಥಾಪಿತವಾಗಿದೆ. ಸ್ಟೇಷನ್ ಇಲ್ಲದೆಯೂ ರೇಡಿಯೋದ ಕೆಲಸ ಮಾಡುತ್ತಿದ್ದ ತುಕಾಲಿ ಅವರಿಗೆ ಮೈಕ್ ಸಿಕ್ಕರೆ ಕೇಳಬೇಕೆ? ’ಹಾಯ್ ಹಲೋ ನಮಸ್ಕಾರ’ ಎಂದು ಶುರುಮಾಡಿ ಅವರು ಮೊದಲು ಮಾತಾಡಿಸಿದ್ದು ವರ್ತೂರು ಸಂತೋಷ್ ಅವರನ್ನೇ. ಇದಕ್ಕೆ ಸಂಗೀತಾ ಹುಸಿಮುನಿಸಿನಿಂದ, ‘ಬರೀ ಅವ್ರನ್ನೇ ಮಾತಾಡಿಸ್ಬೇಕಾ?’ ಎಂದು ಗಾಳಿಯಲ್ಲಿ ಗುದ್ದಿದ್ದಾರೆ.
ಅಷ್ಟೇ ಅಲ್ಲ, ಕಾರ್ತಿಕ್ ಅವರಿಗೆ, ‘ಈ ಮನೆಯಲ್ಲಿ ತಲೆನೋವು ಎಂಬ ಪದಕವನ್ನು ಯಾರಿಗೆ ಕೊಡಲು ಬಯಸುತ್ತೀರಾ?’ ಎಂದು ಕೇಳಿದ್ದಾರೆ. ಅದಕ್ಕೆ ಕಾರ್ತಿಕ್, ‘ಸಂಗೀತಾ’ ಎಂದು ಹೇಳಿದ್ದಾರೆ. ಅದಕ್ಕೆ ಸಂಗೀತಾ ಮುಖದಲ್ಲಿ ಅಸಮಧಾನದ ಗೆರೆಗಳು ಕಾಣಿಸಿಕೊಂಡಿವೆ. ಕಾರ್ತಿಕ್ ಅವರ ಉತ್ತರ ಕೇಳಿ ತುಕಾಲಿ ಅವರು, ‘ಈ ಸಂದರ್ಭದಲ್ಲಿ ನನಗೊಂದು ಹಾಡು ನೆನಪಾಗ್ತಿದೆ’ ಎಂದು ಹೇಳಿ ‘ಏನೋ ಮಾಡಲು ಹೋಗಿ.. ಏನು ಮಾಡಿದೆ ನೀನು…’ ಎಂದು ಹಾಡಿ ಮತ್ತೆ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಬಿಟ್ ಕಾಯಿನ್ ಕೇಸ್ : ಮೂವರು ಇನ್ಸ್ಪೆಕ್ಟರ್ಗಳ ವಿರುದ್ಧ ಪ್ರಕರಣ ದಾಖಲು..!