ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೃಹತ್ ಗ್ಯಾರಂಟಿ ಅಭಿಯಾನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ವಿಜಯಪುರ, ದೇವನಹಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆಯಾಗಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಜನ ಜಾಗೃತಿ ಸಮಾವೇಶ ನಡೆಯಲಿದೆ. ಮುನಿಯಪ್ಪ ಅನ್ನಭಾಗ್ಯ ಗ್ಯಾರಂಟಿಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು, ಗ್ರಾಮಾಂತರ ಜಿಲ್ಲೆಯಲ್ಲಿ 5 ಗ್ಯಾರಂಟಿಗಳ ಅನುಷ್ಠಾನದಲ್ಲೂ ದಾಖಲೆಯಿದೆ. ಎಲ್ಲರಿಗೂ ಐದು ಗ್ಯಾರಂಟಿ ತಲುಪಿಸುವಲ್ಲಿ ಸಚಿವ ಮುನಿಯಪ್ಪ ಯಶಸ್ವಿಯಾಗಿದ್ದಾರೆ.
ಕೆ.ಹೆಚ್.ಮುನಿಯಪ್ಪ ಅತ್ಯಂತ ಯಶಸ್ವಿ ಸಚಿವರಾಗಿ ಗಮನ ಸೆಳೆದಿದ್ದು, ಆಹಾರ ಸಚಿವರಾಗಿಯೂ ಅತ್ಯಂತ ಮೆಚ್ಚುಗೆ ಗಳಿಸಿದ್ದಾರೆ. ವಿಜಯಪುರದ ಅನ್ನಪೂರ್ಣೇಶ್ವರಿ ಕನ್ವೆಷನ್ ಹಾಲ್ನಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ನಂತರ ಮಧ್ಯಾಹ್ನ 1 ಗಂಟೆಗೆ ಬೂದಿಗೆರೆ ಬಸ್ ನಿಲ್ದಾಣ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಗ್ಯಾರಂಟಿಗಳ ಜಾಗೃತಿ ಮೂಡಿಸಲಿದ್ದಾರೆ. ಇವತ್ತು ಇಡೀ ದಿನ ವಿಜಯಪುರ, ದೇವನಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಇದು ಮಹತ್ವದ ಕಾರ್ಯಕ್ರಮವಾಗಿದೆ.
ಇದನ್ನೂ ಓದಿ : ಶಿರಸಿ : ಶಿವಲಿಂಗದ ಮೇಲೆ ಬಳಪದಿಂದ ಬರೆದು ವಿಕೃತಿ ಮೆರೆದ ಕಿಡಿಗೇಡಿಗಳು..!