ಬೆಳ್ತಂಗಡಿ : ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಬ್ಬರು ಅಮಾಯಕರು ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್ಗಾಗಿ ಕಾಯುತ್ತಿದ್ದ ಓರ್ವ ಮಹಿಳೆ ಹಾಗೂ ಪುರಷ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕ ಅತಿಯಾದ ವೇಗದಿಂದ ಬಂದ ಹಿನ್ನೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇಬ್ಬರನ್ನು ಬಲಿ ಪಡೆದ ಲಾರಿ ಬಳಿಕ ವಿದ್ಯುತ್ ಕಂಬ ಹಾಗೂ ಸಮೀಪದಲ್ಲೇ ಇದ್ದ ಕಟ್ಟಡಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಲ್ಲಿ ಮೃತಪಟ್ಟವರು ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ : ಹನುಮ ಧ್ವಜ ವಿವಾದ – ಮಂಡ್ಯದಲ್ಲಿ ಬಿಜೆಪಿಯಿಂದ ಮನೆ ಮನೆಗೆ ಧ್ವಜ ವಿತರಣೆ..!
Post Views: 620