ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ ಸಂಭವಿಸಿದೆ. ಹರ್ದಾ ಜಿಲ್ಲೆಯ ಭೈರಾಗರ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 50ಕ್ಕೂ ಹೆಚ್ಚು ಮನೆಗಳಲ್ಲಿ ಬೆಂಕಿ ವ್ಯಾಪಿಸಿ ಬಾರಿ ಅನಾಹುತವಾಗಿದೆ. 100ಕ್ಕೂ ಹೆಚ್ಚು ಮನೆಗಳಿಗೆ ಸ್ಫೋಟದಿಂದ ಹಾನಿಯಾಗಿದ್ದು, 70 ಆಂಬ್ಯುಲೆನ್ಸ್ಗಳನ್ನು ಬಳಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲ ಗಾಯಳುಗಳಿಗೆ ಸ್ಥಳದಲ್ಲಿ 14 ವೈದ್ಯರಿಂದ ಟ್ರೀಟ್ಮೆಂಟ್ ನೀಡಲಾಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಟಾಕಿ ಕಾರ್ಖಾನೆ ಸುತ್ತಾಮುತ್ತ ಹಲವು ಮನೆಗಳಿದ್ದು ಜೀವ ಉಳಿಸಿಕೊಳ್ಳಲು ಜನರು ಸ್ಥಳದಿಂದ ಓಡಿದ್ದಾರೆ. ಬೆಂಕಿ ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ ಪಟಾಕಿ ಕಾರ್ಖಾನೆ ಸ್ಫೋಟದ ತೀವ್ರತೆಗೆ ಬೆಂಕಿ ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ವ್ಯಾಪಿಸಿದೆ. ಸ್ಫೋಟದಲ್ಲಿ ಇದುವರೆಗೂ 10 ಮಂದಿ ಸಾವನ್ನಪ್ಪಿದ್ರೆ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಭೂಪಾಲ್ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಎಲ್ಲಾ ಆಸ್ಪತ್ರೆಗಳಲ್ಲೂ ತುರ್ತು ಚಿಕಿತ್ಸೆಗೆ ಸೂಚನೆ ನೀಡಲಾಗಿದೆ.
ಬೆಂಕಿಯಲ್ಲಿ ಸುಟ್ಟು ಗಾಯಗಳಾಗಿರುವ ಹಲವಾರು ಜನರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಹಾಗೂ SDRF ರಕ್ಷಣಾ ಸಿಬ್ಬಂದಿ ಆಗಮಿಸಿದ್ದಾರೆ. ಸಿಎಂ ಮೋಹನ್ ಯಾದವ್ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ : ಕಲಬುರಗಿ : 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ..!