ಮಂಡ್ಯ : ಲೋಕಸಭಾ ಚುಣಾವಣೆಗೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ನಾರಾಯಣಗೌಡ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಘೋಷಣೆ ಬಳಿಕ ಪಕ್ಷದ ನಾಯಕರ ವಿರುದ್ಧ ನಾರಾಯಣಗೌಡ ತೀವ್ರ ಅಸಮಾಧಾನಗೊಂಡಿದ್ದಾರೆ. ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಡಲು ನಾರಾಯಣಗೌಡಗೆ ಮನಸ್ಸಿಲ್ಲ. ಮಂಡ್ಯ ಕ್ಷೇತ್ರ ಬಹುತೇಕ ಬಿಜೆಪಿಗೆ ಕೈತಪ್ಪುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ನಾರಾಯಣಗೌಡ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ನಾರಾಯಣಗೌಡ ಕಾಂಗ್ರೆಸ್ನಿಂದ ಲೋಕಸಭೆಗೆ ನಿಲ್ಲಲು ಟಿಕೆಟ್ ಕೇಳಿದ್ದರು, ಈ ವೇಳೆ ಸಿಎಂ ಸಿದ್ದರಾಮಯ್ಯ ಟಿಕೆಟ್ ಬೇಡಿಕೆ ತಿರಸ್ಕರಿಸಿದ್ದು, ಮೊದಲೇ ಕಾಂಗ್ರೆಸ್ ಸೇರುವಂತೆ ಹೇಳಿದ್ದೆ ಆಗ ಬಂದಿದ್ರೆ ಅವಕಾಶ ಸಿಗ್ತಿತ್ತು, ಮೊದಲು ಪಕ್ಷ ಸೇರಿ ಬಳಿಕ ಸ್ಥಾನಮಾನ ಒದಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ನಾರಾಯಣಗೌಡ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!