ಪಾಕ್‌ ಉಗ್ರರ 9 ನೆಲೆಗಳ ಮೇಲೆ ಭಾರತ ಏರ್‌ಸ್ಟ್ರೈಕ್‌ – ‘ಆಪರೇಷನ್ ಸಿಂಧೂರ’ಕ್ಕೆ 70ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್!

ಜಮ್ಮು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ಆಕ್ರಮಿತ ಪ್ರದೇಶದಲ್ಲಿ ಏರ್‌ಸ್ಟ್ರೈಕ್ ನಡೆಸಿದೆ. ಆಪರೇಷನ್ ಸಿಂಧೂರ್ ಹೆಸರಿಲ್ಲಿ 9 ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಲಾಗಿದ್ದು, 70 ಕ್ಕೂ ಹೆಚ್ಚು ಉಗ್ರರರನ್ನು ಸಂಹಾರ ಮಾಡಿದೆ. ದಾಳಿಯಲ್ಲಿ ಸುಮಾರು 55 ಮಂದಿ ಉಗ್ರರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಮಿಸೈಲ್‌ ಅಟ್ಯಾಕ್​ಗೆ ಪಾಕಿಸ್ತಾನ ಬೆಚ್ಚಿಬಿದ್ದಿದ್ದು, ಭಯೋತ್ಪಾದಕರ ನೆಲೆಗಳು ಪುಡಿಪುಡಿಯಾಗಿದೆ. ಭಾರತವನ್ನು ಕೆಣಕಿದವರು ನೆಲಸಮ ಆಗಿದ್ದಾರೆ. ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.

9 ಭಯೋತ್ಪಾದಕರ ನೆಲೆಗಳು ಉಡೀಸ್​ : ಪಾಕಿಸ್ತಾನ ಹಾಗೂ ಪಾಕ್‌‌ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕರ ನೆಲೆಗಳನ್ನು ಏರ್‌ಸ್ಟ್ರೈಕ್‌ ಮೂಲಕ ಹೊಡೆದುರುಳಿಸಿದ್ದು, ‘ಆಪರೇಷನ್‌ ಸಿಂಧೂರ’ ಯಶಸ್ವಿಯಾಗಿದೆ. ಇನ್ನು ಭಾರತ ಪಾಕಿಸ್ತಾನವನ್ನ ಗುರಿಯಾಗಿಸಿಲ್ಲ, ಉಗ್ರರ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

 

ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ ʼಆಪರೇಷನ್ ಸಿಂಧೂರʼ ಎಂಬ ಹೆಸರನ್ನು ಇಡಲಾಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು ಬೆಳಗ್ಗೆ ರಕ್ಷಣಾ ಸಚಿವಾಲಯ ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದು, ಈ ಬಗ್ಗೆ ನಿಖರ ಮಾಹಿತಿ ಸಿಗಲಿದೆ.

ಇದನ್ನೂ ಓದಿ : ಬೇಬಿ ಬಂಪ್​ನೊಂದಿಗೆ ‘ಮೆಟ್​ ಗಾಲಾ’ ಫ್ಯಾಷನ್​ ಹಬ್ಬದಲ್ಲಿ ಹೆಜ್ಜೆ ಹಾಕಿದ ಕಿಯಾರಾ ಅಡ್ವಾಣಿ.. ಫೋಟೋಸ್​ ವೈರಲ್​!

Btv Kannada
Author: Btv Kannada

Read More