ಶಿವಮೊಗ್ಗ : ಶಿವಮೊಗ್ಗದ ಕಾರ್ ಶೋರೂಮ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರ್ ಶೋ ರೂಮ್ನಲ್ಲಿದ್ದ ಕಾರುಗಳು ಸುಟ್ಟು ಭಸ್ಮವಾಗಿದೆ.
ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ 5 ಅಗ್ನಿಶಾಮಕ ಸಿಬ್ಬಂದಿ 2 ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ಲಭ್ಯವಾಗಿದೆ.
ಬೆಂಕಿಯ ಜ್ವಾಲೆ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಟಾಟಾ ಶೋರೂಂ ಕೂಡ ಧಗಧಗಿಸಿದೆ. ಬೆಂಕಿ ಹೊತ್ತಿಕೊಂಡ ವಿಷಯ ತಿಳಿದು ಜಮಾಯಿಸಿದ ನೂರಾರು ಮಂದಿ ಕೆಲ ಕಾರುಗಳನ್ನು ಬೆಂಕಿಯಿಂದ ರಕ್ಷಿಸಲು ಯತ್ನಿಸಿದ್ದಾರೆ.
ಇದನ್ನೂ ಓದಿ ; ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಸಿನಿಮಾದ ಟ್ರೇಲರ್ ರಿಲೀಸ್..!
Post Views: 254