ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಲಾರಿ-ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿದೆ. ಈ ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೈಸೂರು ಮೂಲದ 70 ವರ್ಷದ ಸೋಮಲಿಂಗಪ್ಪ, 68 ವರ್ಷದ ಸೋಮಣ್ಣ, 50 ವರ್ಷದ ರಾಜೇಶ್ವರಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಈ ಅಪಘಾತದಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೋಗುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ.
ಚನ್ನಪಟ್ಟಣ ಆಸ್ಪತ್ರೆ ಶವಗಾರದಲ್ಲಿ ಮೃತದೇಹಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಮಹಿಳಾ ಪೊಲೀಸ್ ಮೊಬೈಲ್ ಕಳ್ಳನ ಹಿಡಿದ ಪ್ರಕರಣಕ್ಕೆ ತಿರುವು, ಘಟನೆಯ ಹಿಂದಿದೆ ಲವ್ ಕಹಾನಿ..!