Download Our App

Follow us

Home » ರಾಜಕೀಯ » ನನಗೂ ತುಮಕೂರಿಗೂ ಅವಿನಾಭಾವ ಸಂಬಂಧ ಇದೆ, ಹೈಕಮಾಂಡ್​ನವರು ಟಿಕೆಟ್​ ಕೊಟ್ಟರೆ ಸ್ಪರ್ಧಿಸುತ್ತೇನೆ : ವಿ ಸೋಮಣ್ಣ..!

ನನಗೂ ತುಮಕೂರಿಗೂ ಅವಿನಾಭಾವ ಸಂಬಂಧ ಇದೆ, ಹೈಕಮಾಂಡ್​ನವರು ಟಿಕೆಟ್​ ಕೊಟ್ಟರೆ ಸ್ಪರ್ಧಿಸುತ್ತೇನೆ : ವಿ ಸೋಮಣ್ಣ..!

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವಿ ಸೋಮಣ್ಣ ಲೋಕಸಭೆ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಇಂದು ಮಾತನಾಡಿದ ಅವರು, ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ ಟಿಕೆಟ್ ಕೇಳಿದ್ದೀನಿ. ಹೈಕಮಾಂಡ್ ಗುರುತಿಸಿ ಟಿಕೆಟ್ ಕೊಟ್ಟರೆ‌ ಸ್ಪರ್ಧಿಸುತ್ತೇನೆ. ಅವರು ಎಲ್ಲಿ ಹೇಳ್ತಾರೋ ಅಲ್ಲಿಂದ ಸ್ಪರ್ಧಿಸ್ತೇನೆ. ಈ ರಾಷ್ಟ್ರಕ್ಕೆ ಒಳ್ಳೆಯ ನಾಯಕ ಬೇಕು. ಮೋದಿ ಮತ್ತೆ ಪ್ರದಾನಿ ಆಗಬೇಕು, ಭಾರತವನ್ನು ಮೋದಿ ಉತ್ತುಂಗಕ್ಕೆ ಕೊಂಡೊಯ್ಯುತ್ತಾರೆ. ಅವರಿಗೆ ನಾವು ನಮ್ಮ ಅಳಿಲು ಸೇವೆ ಮಾಡೋ ಆಸೆ ಇದೆ ಎಂದು ಹೇಳಿದ್ದಾರೆ.

ತುಮಕೂರು ನನಗೆ ಹೊಸದೇನೂ ಅಲ್ಲ. ತುಮಕೂರು ಟಿಕೆಟ್ ನನಗೆ ಕೊಡೋ ಬಗ್ಗೆ ನನಗೇನೂ ಮಾಹಿತಿ ಇಲ್ಲ. ಬೆಂಗಳೂರಿಗೆ ಹತ್ತಿರದ ಜಿಲ್ಲೆಯದು, ಮೊದಲಿನಿಂದಲೂ ತುಮಕೂರಿಗೂ ನನಗೂ ಅವಿನಾಭಾವ ಸಂಬಂಧ ಇದೆ. ಹೈಕಮಾಂಡ್ ಹೋಗು ಅಂದ್ರೆ ಹೋಗ್ತೀನಿ. ಇಲ್ಲಾಂದ್ರೆ ನನ್ನ ಕೆಲಸ ಇದೆ ಅದೇ ಮಾಡ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಇದನ್ನೂ ಓದಿ : ಸುಳ್ಳು ಪ್ರಕರಣ ದಾಖಲಿಸಿದ ಬಿಗ್​ ಬಾಸ್​ ಸ್ಪರ್ಧಿ ಆ್ಯಡಂ ಪಾಷ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here