ಹಾವೇರಿ : ಅನೈತಿಕ ಸಂಬಂಧದ ಶಂಕೆಯಿಂದಾಗಿ ತಮ್ಮನ ಎದೆಗೆ ಅಣ್ಣ ಚೂರಿಯಿಂದ ಇರಿದು ಕೊಂದ ಘಟನೆ ಹಾವೇರಿ ತಾಲೂಕಿನ ನೆಲೋಗಲ ತಾಂಡಾದಲ್ಲಿ ನಡೆದಿದೆ. 42 ವರ್ಷದ ಹನುಮಂತಪ್ಪ ಲಮಾಣಿ ಕೊಲೆಯಾದ ದುರ್ದೈವಿಯಾಗಿದ್ದು, 55 ವರ್ಷದ ಶಂಕರಪ್ಪ ಲಮಾಣಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ತಮ್ಮ ಹನುಮಂತಪ್ಪ ಲಮಾಣಿಯನ್ನ ಕೊಲೆಗೈದ ಶಂಕೆ ವ್ಯಕ್ತವಾಗಿದೆ. ಆರೋಪಿ ಅಣ್ಣ ಶಂಕ್ರಪ್ಪ ಕುಡಿದು ಬಂದು ಮನೆಯಲ್ಲಿ ಜಗಳ ಮಾಡಿದ್ದ, ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ತಮ್ಮ ಹನುಮಂತಪ್ಪನ ಎದೆಗೆ ಚೂರಿ ಇರಿದಿದ್ದನು.
ತಕ್ಷಣ ಹನುಮಂತಪ್ಪ ಲಮಾಣಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಸಾವನ್ನಪ್ಪಿದ್ದಾನೆ. ಆರೋಪಿ ಶಂಕರಪ್ಪನನ್ನು ಪೊಲೀಸರು ಬಂಧಿಸಿದ್ದು, ಹಾವೇರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ : 3 ಸಾ*ವು, 6 ಮಂದಿಗೆ ಗಂಭೀರ ಗಾಯ..!