ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು.

ಎರಡೂ ಕುಟುಂಬದ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಯ ವಿವಾಹ ಮಹೋತ್ಸವಕ್ಕೆ ಸ್ಯಾಂಡಲ್ವುಡ್ನ ಸಾಕಷ್ಟು ಗಣ್ಯರು ಆಗಮಿಸಿ ಶುಭಕೋರಿದರು.

ಮದುವೆಗೆ ಕಿಚ್ಚ ಸುದೀಪ್, ಯಶ್, ಗಣೇಶ್, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ನಿರ್ಮಾಪಕರು, ನಿರ್ದೇಶಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧುವರರಿಗೆ ಶುಭ ಕೋರಿದರು.
ಇದನ್ನೂ ಓದಿ : http://ಪ್ರೇಮಿಗಳ ದಿನದಂದು ಪೃಥ್ವಿ ಅಂಬಾರ್, ಪ್ರಮೋದ್ ನಟನೆಯ ‘ಭುವನಂ ಗಗನಂ’ ಚಿತ್ರ ತೆರೆಗೆ!
Author: Btv Kannada
Post Views: 609









