Download Our App

Follow us

Home » ಸಿನಿಮಾ » ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಮಾರ್ಟಿನ್​ ಚಿತ್ರತಂಡ ಪಾರು..!

ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಮಾರ್ಟಿನ್​ ಚಿತ್ರತಂಡ ಪಾರು..!

ಬೆಂಗಳೂರು : ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್‌ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ.

ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡ ದೆಹಲಿಯಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ.

ಸೀಟ್‍ಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ.

ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದರು.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಪ್ರೀತಿಸಿ ಮದುವೆಗೆ ರೆಡಿ ಆಗಿದ್ದ ಪ್ರೇಮಿಗಳಿಗೆ ಪೋಷಕರೇ ವಿಲನ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here