ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್ ಇದೆ. ಹಾಗಾಗಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಲೋಕಸಭಾ ಚುನಾವಣೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಾಗ್ತಿದೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸೀಟು ಗೆಲ್ಲುವ ಬಗ್ಗೆ ನಾಯಕರು ಚರ್ಚೆ ಮಾಡಲಿದ್ದಾರೆ. ಇನ್ನು, ಸಚಿವರಾದ ಎಂ.ಸಿ ಸುಧಾಕರ್, ಕೃಷ್ಣಬೈರೇಗೌಡ, ಚೆಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗೌಡ, ಶರತ್ ಬಚ್ಚೇಗೌಡ ಸೇರಿ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮಂಡ್ಯ ರಾಜಕಾರಣ ಇದೀಗ ತೀವ್ರ ಕುತೂಹಲ ಕೆರಳಿಸಿದೆ. ಹೌದು.. ಇಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ತೆರಳಿ ತಡರಾತ್ರಿ ಅಮಿತ್ ಶಾ, ಜೆ.ಪಿ.ನಡ್ಡಾ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಮಾತುಕತೆ ಆರಂಭವಾಗ್ತಿದ್ದಂತೆ ಹೆಚ್ಡಿಕೆ ಮಂಡ್ಯ ಕ್ಷೇತ್ರದ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಂಡ್ಯ ಜೆಡಿಎಸ್ನ ಭದ್ರಕೋಟೆ, ಅಸೆಂಬ್ಲಿಯಲ್ಲಿ ಹೆಚ್ಚು ಮತ ಬಂದಿವೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೇ ಬಿಟ್ಟುಕೊಡಿ ಎಂದು ಹೆಚ್ಡಿಕೆ ಪಟ್ಟು ಹಿಡಿದಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಖುದ್ದು ಪ್ರಧಾನಿ ಭೇಟಿ ಮಾಡಿದ್ದು, ಸುಲಮತಾ ಪ್ರಧಾನಿ ಭೇಟಿ ನಂತರ ಜೆಡಿಎಸ್ ಅಲರ್ಟ್ ಆಗಿದೆ.
ಇದನ್ನೂ ಓದಿ : ಬಡೇ ಮಿಯಾನ್ ಚೋಟೆ ಮಿಯಾನ್ ಟೈಟಲ್ ಟ್ರ್ಯಾಕ್ ರಿಲೀಸ್..!