ತುಮಕೂರು : ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹಾನಗರ ಪಾಲಿಕೆಯ ಜನನ ಮರಣ ವಿಭಾಗ, ಕಂದಾಯ ವಿಭಾಗ, ಆರೋಗ್ಯ ಇಲಾಖೆ ವಿಭಾಗ, ರೆಕಾರ್ಡ್ ರೂಂ, ಸೇರಿದಂತೆ ಇತರೆ ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪಾಲಿಕೆ ಆಯುಕ್ತೆ ಅಶ್ವಿಜಾ ರವರನ್ನ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಪಾಲಿಕೆಯ ಎಲ್ಲಾ ದ್ವಾರಗಳನ್ನ ಬಂದ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು ಮಹಾನಗರ ಪಾಲಿಕೆಯಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾದ ಕಾರಣ, ಹಾಗೂ ಕೆಲಸ ಮಾಡಿಕೊಡಲು ಹಣ ಕೇಳುತ್ತಿರುವ ಬಗ್ಗೆ ಬಂದಿದ್ದ ಆರೋಪ ಹಿನ್ನೆಲೆ, ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಎಸ್.ಪಿ ವಾಲಿಬಾಷಾ ನೇತೃತ್ವದಲ್ಲಿ ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ, ಉಮಾಶಂಕರ್, ಹಾಗೂ ಇನ್ಸ್ಪೆಕ್ಟರ್ ಶಿವರುದ್ರಪ್ಪ ಸೇರಿದಂತೆ ಒಟ್ಟು 6 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಸತತ ಅರ್ಧಗಂಟೆಯಿಂದಲೂ ಪರಿಶೀಲನೆ ಮುಂದುವರೆದಿದೆ.
ಇದನ್ನೂ ಓದಿ : ಐಪಿಎಲ್ 17ನೇ ಆವೃತ್ತಿ ಆರಂಭಕ್ಕೆ ವೇದಿಕೆ ಸಜ್ಜು, ಮೊದಲ ಪಂದ್ಯದಲ್ಲಿ ಸಿಎಸ್ಕೆ-ಆರ್ಸಿಬಿ ನಡುವೆ ಹೈವೋಲ್ಟೇಜ್ ಕದನ..!