ಚಾಮರಾಜನಗರ : ಬೋರ್ವೆಲ್ ಕೊರೆಸಲು ಅರ್ಜಿ ಹಾಕುವ ವಿಚಾರಕ್ಕೆ ಹಣ ಪಡೆಯುತ್ತಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿ ಚಾಮರಾಜನಗರದಲ್ಲಿ ಲೋಕಾ ಬಲೆಗೆ ಬಿದ್ದಿದ್ದಾರೆ. ತಾಲೂಕು ಅಧಿಕಾರಿ ನಾಗರಾಜು ಎಂಟು ಸಾವಿರ ಹಣ ಪಡೆಯುವಾಗ ಲೋಕಾ ಟ್ರ್ಯಾಪ್ ಮಾಡಿದೆ.
ತಾಲ್ಲೂಕಿನ ಕಣ್ಣೇಗಾಲ ಗ್ರಾಮದ ಫಲಾನುಭವಿಯೊಬ್ಬರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಅವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಬೇಕಾಗಿತ್ತು. ಕೆಲಸ ಮಾಡಿಕೊಡಲು ನಾಗರಾಜು ಅವರು 8 ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಫಲಾನುಭವಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಶನಿವಾರ ನಗರದಲ್ಲಿ ನಾಗರಾಜು, ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ಬಂಧಿಸಿ, 8 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಶಶಿಕುಮಾರ್, ಮುಖ್ಯ ಪೇದೆ ಮಹಾಲಿಂಗಸ್ವಾಮಿ, ಶ್ರೀನಿವಾಸ್, ಮನೋರಂಜನ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ : ಬೆಚ್ಚಿ ಬೀಳಿಸಿದ ಸರಣಿ ಕಳ್ಳತನ : ಮುಸುಕುಧಾರಿಗಳ ಕೃತ್ಯ CCTVಯಲ್ಲಿ ಸೆರೆ..!