ಹೊಸಕೋಟೆ : ಕಾಲು ಜಾರಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ. 65 ವರ್ಷದ ಮರಿಯಪ್ಪ, 60 ವರ್ಷದ ಮುನಿಯಮ್ಮ, 40 ವರ್ಷದ ಮಗಳು ಭಾರತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೈ ತೊಳೆಯಲು ಹೋಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಕರಿಬೀರನಹೊಸಹಳ್ಳಿ ಸಮೀಪ ಉತ್ಸವ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಕೈತೊಳೆಯಲು ಹೋಗಿ ಈ ದುರಂತ ಸಂಭವಿಸಿದೆ. ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನ ಹೊರತೆಗೆದು ಹೊಸಕೋಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.
ಇದನ್ನೂ ಓದಿ : ಎರಡ್ಮೂರು ದಿನಗಳಲ್ಲಿ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್ಗೆ ಕಳಿಸುತ್ತೇವೆ : ಬಿ.ವೈ ವಿಜಯೇಂದ್ರ..!
Post Views: 411