ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ಕನೇ ದಿನವೂ ಬಾಂಬರ್ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸಿಸಿಬಿ ತಂಡಗಳಿಂದ ತನಿಖೆ ಮುಂದುವರೆದಿದ್ದು, CCTV ಚಲನವಲನ ಬಿಟ್ರೆ ಆರೋಪಿ ಬಗ್ಗೆ ಬೇರೆ ಸುಳಿವು ಸಿಕ್ಕಿಲ್ಲ.
ಆರೋಪಿಗಾಗಿ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಹುಡುಕಾಟ ನಡೆಸಿದ್ದಾರೆ. ರಾಮೇಶ್ವರಂ ಕೆಫೆಯ ಬೇರೆ ಬೇರೆ ಬ್ರಾಂಚ್ಗಳಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬೇರೆ ಬೇರೆ ಬ್ರಾಂಚ್ಗಳಲ್ಲೂ ಶಂಕಿತ ಓಡಾಡಿರುವ ಶಂಕೆ ವ್ಯಕ್ತವಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ NIAಗೆ ವರ್ಗಾವಣೆಯಾಗಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ಬೆಂಗಳೂರಿನ ಕುಂದನಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದು 3 ದಿನಗಳಾಯ್ತು. ಆದರೆ ಶಂಕಿತ ವ್ಯಕ್ತಿಯನ್ನು ಪತ್ತೆ ಹಚ್ಚುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜೊತೆಗೆ ಆತ ಸ್ಫೋಟಕ್ಕಾಗಿ ಮಾಡಿದ್ದ ಪ್ಲಾನ್ ಪೊಲೀಸರಿಗೆ ನಿಜಕ್ಕೂ ಚಾಲೆಂಜಿಂಗ್ ಆಗಿದೆ. ಈ ಪ್ರಕರಣದ ತನಿಖೆ ಇದೀಗ ಮತ್ತಷ್ಟು ಚುರುಕುಗೊಂಡಿದೆ.
ಇದನ್ನೂ ಓದಿ : ಟ್ರೇಲರ್ನಲ್ಲೇ ಮೋಡಿ ಮಾಡಿದ ವಿಜಯ ರಾಘವೇಂದ್ರ ನಟನೆಯ ‘ಜೋಗ್ 101’ ಚಿತ್ರ ಮಾ.7ಕ್ಕೆ ರಿಲೀಸ್..!