ಗದಗ : ಸಾಲ ಬಾಧೆಯಿಂದಾಗಿ ಮೂವರು ಪ್ರಾಣ ಬಿಟ್ಟಿರುವ ಮನಕಲಕುವಂತಹ ಘಟನೆ ಗದಗದ ಲಕ್ಷ್ಮೇಶ್ವರದಲ್ಲಿ ನಡೆದಿದೆ. ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಮಂಜುನಾಥ್ ತೇಲಿ, 40 ವರ್ಷದ ಸಾವಕ್ಕ ತೇಲಿ, 39 ವರ್ಷದ ರೇಣವ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾವೇರಿಯ ಯಲವಿಗಿ ಗ್ರಾಮದ ರೈಲು ನಿಲ್ದಾಣದ ಬಳಿ ತಾಯಿ, ಮಗ ನಿನ್ನೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಇಬ್ಬರ ಸಾವಿನ ಸುದ್ದಿ ತಿಳಿದು ದೊಡ್ಡಮ್ಮ ನೇಣಿಗೆ ಶರಣಾಗಿದ್ದಾರೆ.
ಬ್ಯಾಂಕ್ ನಿಂದ 4 ಲಕ್ಷ ಸಾಲ ಪಡೆದು ಟ್ರ್ಯಾಕ್ಟರ್ ಖರೀದಿಸಿದ್ದರು. ಹೀಗಾಗಿ ಟ್ರ್ಯಾಕ್ಟರ್ ಸಾಲ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು. ಇದರಿಂದ ಮನನೊಂದು ತಾಯಿ, ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿದ್ದರು. ಇಬ್ಬರ ಸಾವಿನ ಸುದ್ದಿ ತಿಳಿದು ದೊಡ್ಡಮ್ಮ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಪಾಕ್ ಪರ ಘೋಷಣೆ ಕೇಸ್ : FSL ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!