ಬೆಂಗಳೂರು : ನಾನು ಗುತ್ತಿಗೆದಾರರಿಂದ ನಯಾಪೈಸೆ ಪಡೆದಿಲ್ಲ, ಹಣ ಪಡೆದಿದ್ದೇನೆ ಅಂತಾ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಈ ಬಗ್ಗೆ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನು ಹಣಕಾಸು ಸಚಿವನಾಗಿದ್ದಾಗ 5 ಪೈಸೆಯನ್ನೂ ಕೇಳಿಲ್ಲ. ಗುತ್ತಿಗೆದಾರರಿಗೆ ಒಂದೇ ಬಾರಿಗೆ ಬಿಲ್ ಕೊಡಕ್ಕಾಗಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಬಿಲ್ ಮೊತ್ತ ಹೆಚ್ಚಿದೆ. ಒಂದೇ ಬಾರಿಗೆ 1.20 ಲಕ್ಷ ಕೋಟಿ ರೂಪಾಯಿ ಟೆಂಡರ್ ಕೊಟ್ಟಿದ್ದಾರೆ ಎಂದಿದ್ದಾರೆ.
ಈಗ ಒಂದೇ ಬಾರಿಗೆ ಬಾಕಿ ಬಿಲ್ ಬಿಡುಗಡೆ ಮಾಡಿ ಅಂತ ಹೇಳ್ತಿರಾ, ನಾನೇನು ದುಡ್ಡು ಪ್ರಿಂಟ್ ಮಾಡ್ಲಾ. ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ : ಗದಗದಲ್ಲಿ ಮನಕಲಕುವ ಘಟನೆ – ಸಾಲ ಬಾಧೆಯಿಂದಾಗಿ ಒಂದೇ ಕುಟುಂಬದ ಮೂವರು ಆ*ತ್ಮಹ*ತ್ಯೆ..!