ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ನಿವಾಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಿನ್ನೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಕುರಿತು ಚರ್ಚೆ ನಡೆದಿದೆ.
ಡಾ. ಮಂಜುನಾಥ್ ಮತ್ತು ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಕುರಿತು ನಿನ್ನೆ ಸಭೆಯಲ್ಲಿ ಮಹತ್ವದ ಮಾತುಕತೆ ನಡೆದಿದೆ. ಇಬ್ಬರ ಹೆಸರನ್ನ ಹೈಕಮಾಂಡ್ಗೆ ಕಳಿಸುವ ಬಗ್ಗೆ ನಿನ್ನೆ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಇಬ್ಬರಲ್ಲಿ ಒಬ್ಬರ ಸ್ಪರ್ಧೆಗೆ ಎರಡು ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯವಿದೆ. ಇವರಿಬ್ಬರ ಹೆಸರಿನ ಜೊತೆ ಕುಮಾರಸ್ವಾಮಿ ಹೆಸರನ್ನು ಬಿಜೆಪಿ-ಜೆಡಿಎಸ್ ನಾಯಕರು ಪ್ರಸ್ತಾಪ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರದಿಂದ ಹಿಂದೆ ಕುಮಾರಸ್ವಾಮಿ ಗೆದ್ದಿದ್ದರು, ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಸ್ಪರ್ಧೆಗೂ ನಾಯಕರ ಅಭಿಪ್ರಾಯಪಟ್ಟಿದ್ಧಾರೆ. ಬಿಜೆಪಿ ಹೈಕಮಾಂಡ್ಗೆ ಡಾ.ಮಂಜುನಾಥ್, ಯೋಗೇಶ್ವರ್, ಕುಮಾರಸ್ವಾಮಿ ಹೆಸರು ಕಳಿಸುವ ಬಗ್ಗೆ ನಿನ್ನೆ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಹಾಗಾದ್ರೆ ಬೆಂಗಳೂರು ಗ್ರಾಮಾಂತರದಲ್ಲಿ ಯಾರು ಸ್ಪರ್ಧೆ ಮಾಡ್ತಾರೆ..? ಬಿಜೆಪಿ ಹೈಕಮಾಂಡ್ ತೀರ್ಮಾನದ ನಂತರ ಯಾರ ಸ್ಪರ್ಧೆ ಅನ್ನೋದು ಫೈನಲ್ ಆಗುವ ಸಾಧ್ಯತೆಯಿದೆ.
ಇದನ್ನೂ ಓದಿ : ದೇಶದ ಮೊದಲ ಅಂಡರ್ ವಾಟರ್ ಮೆಟ್ರೋಗೆ ಇಂದು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ..!