ತುಮಕೂರು : ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಹೋಗುತ್ತಿದ್ದರು.
ಅದೇ ವೇಳೆ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್ ಅವರ ಕಾರಿನ ಬಲಗಡೆಗೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಚಾಲಕನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಆಟೋ ಚಾಲಕ ಜಗದೀಶ್ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಗಾಯಗೊಂಡಿರುವ ಜಗದೀಶ್ಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.
ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್ ಬಾಸ್ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಇದನ್ನೂ ಓದಿ : ಮಹಾರಾಜ ಯದುವೀರರಿಗೆ ಬಿಜೆಪಿ ಟಿಕೆಟ್ ಸಿಕ್ಕಿದ್ದು ಹೇಗೆ ? – ಬಿಟಿವಿಯಲ್ಲಿ ಸ್ಪೋಟಕ ರಹಸ್ಯ