ಕನ್ನಡ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಮತ್ತು ಪತ್ನಿ ಮಾನಸ ತಮ್ಮ ಹೊಸ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರಕ್ಕೆ ಪ್ರಯಾಣ ಮಾಡುವಾಗ ಕಾರು ಅಪಘಾತವಾಗಿತ್ತು. ಕುಣಿಗಲ್ನಿಂದ ಕುರುಡಿಹಳ್ಳಿಗೆ ಹೋಗುತ್ತಿದ್ದ ಆಟೋವೊಂದು ತುಕಾಲಿ ಸಂತೋಷ್ ಕಾರಿನ ಬಲ ಭಾಗಕ್ಕೆ ಡಿಕ್ಕಿ ಹೊಡೆದು ಬಹುತೇಕ ನಜ್ಜುಗುಜ್ಜಾಗಿತ್ತು.
ಈ ಅಪಘಾತದಲ್ಲಿ ಗಾಯಗೊಂಡ ಆಟೋ ಚಾಲಕನನ್ನು ತಕ್ಷಣವೇ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾರ್ಚ್ 13ರಂದು ರಾತ್ರಿ ಈ ಘಟನೆ ನಡೆದಿದ್ದು, ಮಾರ್ಚ್ 14ರಂದು ಆಟೋ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಆಟೋ ಚಾಲಕ ಮೃತಪಟ್ಟಿದ್ದು, ಮೃತಪಟ್ಟಿರುವ ಆಟೋ ಚಾಲಕನನ್ನು 40 ವರ್ಷದ ಜಗದೀಶ್ ಎಂದು ಗುರುತಿಸಲಾಗಿದೆ. ಜಗದೀಶ್ ಅವರ ಅಗಲುವಿಕೆ ಕುಟುಂಬಸ್ಥರಿಗೆ ತೀವ್ರ ನೋವುಂಟು ಮಾಡಿದೆ.
ಈ ಬಗ್ಗೆ ತುಕಾಲಿ ಸಂತೋಷ್ ಅವರು ಇನ್ನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ತುಕಾಲಿ ಸಂತೋಷ್ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಮಾತ್ರವಲ್ಲದೇ ಇನ್ನೂ ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಬಿಗ್ ಬಾಸ್ನಿಂದ ಸಿಕ್ಕ ಸಂಭಾವನೆಯಲ್ಲಿ ಕಿಯಾ ಕಾರು ಖರೀದಿ ಮಾಡಿದ್ದರು. ಪತ್ನಿ ಜೊತೆ ಶೋ ರೂಮ್ಗೆ ತೆರಳಿ ಕಾರು ಖರೀದಿಸಿ ತುಕಾಲಿ ಸಂತೋಷ್ ಅವರು ಖುಷಿಪಟ್ಟಿದ್ದರು. ಕೆಲವೇ ದಿನಗಳ ಹಿಂದೆ ಅವರ ಹೊಸ ಕಾರಿನ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಇದನ್ನೂ ಓದಿ : ಹೋಟೆಲ್ನಲ್ಲಿಯೇ ಕುಂಕುಮ ಹಚ್ಚಿದೆ, ಅಲ್ಲೇ ಫಸ್ಟ್ ನೈಟ್ ಆಯ್ತು : ಲಕ್ಷ್ಮೀ ಮಾಜಿ ಪತಿ ಶಾಕಿಂಗ್ ಹೇಳಿಕೆ..!