ಬೆಂಗಳೂರು : ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಕರುವಿನ ಹೊಟ್ಟೆ, ಕಾಲಿಗೆ ಗಂಭೀರ ಗಾಯವಾಗಿದ್ದು, ಚಾಲಕನ ಕೃತ್ಯದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳೆದ ಮಾರ್ಚ್ 2ರಂದು ಈ ಘಟನೆ ನಡೆದಿದ್ದು, ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ತಕ್ಷಣ ಆಗಮಿಸಿದ ಆರ್ಮಿ ಫೋರ್ಸ್ ಸಿಬ್ಬಂದಿ ಕರುವನ್ನು ರಕ್ಷಣೆ ಮಾಡಿದರೂ ಕರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
ಮೂಕ ಪ್ರಾಣಿಯ ಮೇಲೆ ಅಮಾನವೀಯವಾಗಿ ಕಾರು ಹರಿಸಿ ಕ್ರೌರ್ಯ ಮೆರೆದ ಚಾಲಕನ ವಿರುದ್ಧ ಇದೀಗ ಎಲ್ಲೆಡೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ದಾಖಲು ಮಾಡಲು ಪ್ರಾಣಿಪ್ರಿಯರು ಮುಂದಾಗಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ನಕಲಿ ವಜ್ರ ನೀಡಿ ವಂಚಿಸಲು ಯತ್ನ : ನಾಲ್ವರು ಅರೆಸ್ಟ್..!
Post Views: 188