ವಿಜಯಪುರ : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಪೊಲೀಸರು ರಾಜ್ಯಾದ್ಯಂತ ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿ ದಾಖಲೆ ಇಲ್ಲದ 2.93 ಕೋಟಿ ವಶಕ್ಕೆ ಪಡೆದಿದ್ದಾರೆ.
ಟೋಯೊಟಾ ಕಾರಿನಲ್ಲಿ 2 ಕೋಟಿ 93 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದರು. ಲೋಕಸಭೆ ಎಲೆಕ್ಷನ್ ಹಿನ್ನಲೆ ಸಿಇಎನ್ ಪೊಲೀಸರು ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದ್ದು, ತಪಾಸಣೆ ವೇಳೆ ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ.
ಇನ್ನು ಕಾರ್ಯಾಚರಣೆ ನಡೆಸಿದ ಪೊಲೀಸರು ಟೋಯೋಟಾ ಕಾರು, ನಗದು ಹಣ ಹಾಗೂ ಎರಡು ಮೊಬೈಲ್ನ್ನು ವಶಕ್ಕೆ ಪಡೆದಿದ್ದು, ಆರೋಪಿಗಳಾದ ಬಾಲಾಜಿ ನಿಕ್ಕಂ, ಸಚಿನ್ ಮೋಯಿತೆ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಿಜಯಪುರದಲ್ಲಿ ಕುಡಿಯುವ ನೀರಿಗಾಗಿ ಟವರ್ ಏರಿ ಯುವಕನ ಹುಚ್ಚಾಟ..!