ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಜಿಲ್ಲೆ ಹಾಗೂ ಅಂತರರಾಜ್ಯ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಾಣ ಮಾಡಿ ದಾಖಲೆ ಇಲ್ಲದೆ ಸಾಗಿಸುವ ಹಣ, ಮುಂತಾದವುಗಳನ್ನು ಚುನಾವಣಾ ಅಧಿಕಾರಿಗಳು, ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ದಾಖಲೆ ಇಲ್ಲದ ಸಾಗಿಸುತ್ತಿದ್ದ 3 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಆನೆಪಾಳ್ಯ ಸರ್ಕಲ್ ಬಳಿ ಹಣ ಸೀಜ್ ಮಾಡಿದ್ದು, ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ 10.30ರ ಸುಮಾರಿಗೆ ಕಾರು ಪರಿಶೀಲನೆ ಮಾಡುವ ವೇಳೆ ಪಿಂಕು ಮೈತಿ ಎಂಬುವವರ ಕಾರಿನಲ್ಲಿ 3 ಲಕ್ಷ ಹಣ ಸಿಕ್ಕಿದೆ. ಆರ್.ಟಿ ನಗರದಿಂದ ಕೋರಮಂಗಲಕ್ಕೆ ಪಿಂಕು ಅವರು ಹೋಗುತ್ತಿದ್ದರು. ಪಿಂಕು ಹಣದ ಪರಿಶೀಲನೆ ಮಾಡುವ ವೇಳೆ ಸರಿಯಾದ ಮಾಹಿತಿ ನೀಡದ ಕಾರಣ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಲೀಡ್ – ಈ ದಿನ ಡಾಟ್ ಕಾಮ್ ಸ್ಪೋಟಕ ಸಮೀಕ್ಷೆ..!